ಮುರಕಟ್ಟಿ ಕ್ರಾಸ್ ನ ಮರದಲ್ಲಿ ನೇತಾಡುತ್ತಿದೆ “ಆತನ” ಶವ…!

ಧಾರವಾಡ: ತಾಲೂಕಿನ ಮುರಕಟ್ಟಿ ಕ್ರಾಸ್ ಬಳಿಯಲ್ಲಿ ಅನಾಮಧೇಯ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದು, ದಾರಿ ಹೋಕರಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ.

ಸುಮಾರು 50ರಿಂದ 55 ವಯಸ್ಸಿನ ವ್ಯಕ್ತಿಯೂ ಮರದ ಟೊಂಗೆಗೆ ಹಗ್ಗ ಕಟ್ಟಿಕೊಂಡು ನೇಣಿಗೆ ಶರಣಾಗಿದ್ದಾನೆ. ದಾರಿ ಹೋಕರು, ಮರದಲ್ಲಿ ನೇತಾಡುತ್ತಿದ್ದ ಶವವನ್ನ ನೋಡಿ, ಗಾಬರಿಯಾಗಿ ಕಾಲ್ಕಿತ್ತ ಘಟನೆಯೂ ನಡೆದಿದೆ.
ಸ್ಥಳೀಯರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿಯನ್ನ ನೀಡಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಮರದಲ್ಲಿದ್ದ ಶವವನ್ನ ಧಾರವಾಡದ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಭಾವಚಿತ್ರವನ್ನ ಹಿಡಿದುಕೊಂಡು, ಅಕ್ಕಪಕ್ಕದ ಗ್ರಾಮಗಳಲ್ಲಿ ವ್ಯಕ್ತಿಯ ಪರಿಚಯವನ್ನ ಹುಡುಕುವುದಕ್ಕೆ ಪೊಲೀಸರು ಮುಂದಾಗಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಗ್ರಾಮೀಣ ಠಾಣೆ ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.