Breaking ಹುಬ್ಬಳ್ಳಿ ರೋಟರಿ ಶಾಲೆಯ ಪ್ರಿನ್ಸಿಪಾಲ ನೇಣಿಗೆ ಶರಣು…!!!!

Exclusive
ಖಾಸಗಿ ಶಾಲೆಯ ಪ್ರಿನ್ಸಿಪಾಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ: ಘಟನಾ ಸ್ಥಳಕ್ಕೆ ಇನ್ಸ್ಪೆಕ್ಟರ್ ಹೂಗಾರ್ ಭೇಟಿ
ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್ರೊಬ್ಬರು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೇಶಪಾಂಡೆ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಹುಬ್ಬಳ್ಳಿಯ ಅಶೋಕ ನಗರದಲ್ಲಿನ ಆದರ್ಶ ನಗರದ ರೋಟರಿ ಸ್ಕೂಲ್ ನಲ್ಲಿ ಪ್ರಿನ್ಸಿಪಾಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನರೇಶ್ ಪಾಟೀಲ್ ಅವರು ಹಲವು ವರ್ಷಗಳಿಂದ ಪ್ರಿನ್ಸಿಪಾಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸದಾ ಲವಲವಿಕೆಯಿಂದ ನರೇಶ್ ಪಾಟೀಲ್ ಅವರು ಎಲ್ಲರ ಜೊತೆ ನಗು ನಗುತ್ತಾ ಮಾತನಾಡುತ್ತಿದ್ದರು.
ಆದ್ರೆ, ಇಂದು ಸಾಯಂಕಾಲ ದೇಶಪಾಂಡೆ ನಗರದಲ್ಲಿನ ತಮ್ಮ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಮನೆಯವರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ರು ಕೂಡ ಅಷ್ಟರಲ್ಲೇ ನರೇಶ್ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಎಂ ಎಸ್ ಹೂಗಾರ್ ಭೇಟಿ ನೀಡಿ ಶವ ಪರಿಶೀಲನೆ ನಡೆಸಿದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಂಡು ನರೇಶ್ ಅವರು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ತನಿಖೆಗೆ ಮುಂದಾಗಿದ್ದಾರೆ.