ಮಹಿಳಾ ಸಂಘದಲ್ಲಿ ಸಾಲ-ಶೆರೇವಾಡದಲ್ಲಿ ಮಹಿಳೆ ನೇಣಿಗೆ ಶರಣು..!

ಹುಬ್ಬಳ್ಳಿ: ಮಹಿಳಾ ಸಂಘವೂ ಸೇರಿದಂತೆ ವಿವಿದೆಡೆ ಸಾಲ ಮಾಡಿಕೊಂಡಿದ್ದ ಮಹಿಳೆಯೋರ್ವಳು ತನ್ನದೇ ಚಹಾ ಅಂಗಡಿಯಲ್ಲಿ ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿ ತಾಲೂಕಿನ ಶೆರೇವಾಡ ಗ್ರಾಮದಲ್ಲಿ ನಡೆದಿದೆ.

ಮಂಜುಳಾ ಅಣ್ಣಿಗೇರಿಮಠ ಎಂಬ 40 ವರ್ಷದ ಮಹಿಳೆ, ಚಹಾ ಅಂಗಡಿಗೋಸ್ಕರ ವಿವಿಧ ಮಹಿಳಾ ಸಂಘ ಸಂಸ್ಥೆಗಳಲ್ಲಿ, ಬ್ಯಾಂಕ್ ಗಳಲ್ಲಿ ಹಾಗೂ ಕೈಗಡ ಸಾಲ ಮಾಡಿಕೊಂಡಿದ್ದರು. ಆದ್ರೆ ಲಾಕ್ ಡೌನ್ ಸಮಯದಲ್ಲಿ ವ್ಯಾಪಾರ ವಹಿವಾಟು ಸರಿಯಾಗಿ ಮಾಡಿದ ಸಾಲವನ್ನು ತೀರಿಸಲಾಗದೇ ತನ್ನದೇ ಚಹಾ ಅಂಗಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ ಅಂತಾ ಮೃತಪಟ್ಟ ಮಹಿಳೆಯ ತಂದೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರಿಗೆ ದೂರನ್ನು ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.