Posts Slider

Karnataka Voice

Latest Kannada News

ರೇಲ್ವೆ ಹಳಿಗೆ ಬಿದ್ದು ಸರ್ಕಲ್ ಪೊಲೀಸ್ ಇನ್ಸಪೆಕ್ಟರ್ ದುರ್ಮರಣ…!!!

1 min read
Spread the love

ಮಾನಸಿಕವಾಗಿ ನೊಂದಿದ್ದ ಇನ್ಸಪೆಕ್ಟರ್

ಕಲಬುರಗಿ: ರೈಲಿಗೆ ತಲೆಕೊಟ್ಟು ಸರ್ಕಲ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಬಿದ್ದಾಪುರ ಕಾಲೋನಿ ರೈಲ್ವೆ ಹಳಿ ಮೇಲೆ ನಡೆದಿದೆ.

ಬಾಪುಗೌಡ (45) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ, ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವೈಯರಲೆಸ್ ವಿಭಾಗದಲ್ಲಿ ಸರ್ಕಲ್​ ಇನ್ಸ್​ಪೆಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕೆಲ ದಿನಗಳಿಂದ ಮೌತ್ ಕ್ಯಾನ್ಸರ್‌ನಿಂದ ಬಾಪುಗೌಡ ಬಳಲುತ್ತಿದ್ದರು, ಈ ಕ್ಯಾನ್ಸರ್ ಕಾಯಿಲೆಯಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಇದೇ ಕಾರಣಕ್ಕೆ ಬಾಪುಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹವನ್ನ ಕಲಬುರಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದ್ದೂ, ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *