Posts Slider

Karnataka Voice

Latest Kannada News

ರಾಜ್ಯದ ಎಲ್ಲ ಶಿಕ್ಷಕರಿಗೂ 24*7 ಅವಧಿಯಲ್ಲಿ ಕೋವಿಡ್ ನಿರೋಧಕ ಲಸಿಕೆ ಕೊಡಿ..!

Spread the love

ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರು
ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ
ಬೆಂಗಳೂರು -೦೧

ವಿಷಯ:ರಾಜ್ಯದ ಎಲ್ಲಾ ಶಿಕ್ಷಕರಿಗೂ 24×7 ಅವಧಿಯಲ್ಲಿ ಕೋವಿಡ್ ನಿರೋಧಕ ಲಸಿಕೆ ನೀಡಲೇಬೇಕೆಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ.ರಿ ಹುಬ್ಬಳ್ಳಿ ಇವರ ಮನವಿ..

       *ಈ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘಗಳ  ಹುಬ್ಬಳ್ಳಿ ಯಿಂದ ಎಲ್ಲ ಹಂತದ ಪದಾಧಿಕಾರಿಗಳು ಕರ್ನಾಟಕ ಘನ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ   ಈ ನಾಡಿನ ಸಮಸ್ತ ಶಿಕ್ಷಕರ ವತಿಯಿಂದ  ವಿನಂತಿಸಿಕೊಳ್ಳುವುದೇನೆಂದರೆ*...

         *ದಿನಾಂಕ 21 ರಿಂದ ರಾಷ್ಟ್ರಾದ್ಯಂತ ಎಲ್ಲ ನಾಗರಿಕರಿಗೆ ಕೋವಿಡ್  ನಿರೋಧಕ ಲಸಿಕೆಯನ್ನು ಹಾಕುವಂಥ ಕಾರ್ಯಕ್ರಮವನ್ನು ಘೋಷಿಸಿದ್ದಾರೆ ಈ ದಿಸೆಯಲ್ಲಿ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳನ್ನು ಅಭಿನಂದಿಸುತ್ತಾ ನಮ್ಮ ರಾಜ್ಯದಲ್ಲಿರುವ ಕಾರ್ಯನಿರ್ವಹಿಸುತ್ತಿರುವ ಅವರಿವರೆನ್ನದೆ ಎಲ್ಲ ಶಿಕ್ಷಕರಿಗೂ ತಾವುಗಳು 21 ರಿಂದ ಪ್ರಾರಂಭವಾಗುವ ಲಸಿಕಾಕರಣ ಹಾಕುವ ಶಿಬಿರದಲ್ಲಿ ಪ್ರಥಮ ಆದ್ಯತೆಯಲ್ಲಿ ಗಂಭೀರವಾಗಿ ಪರಿಗಣಿಸಿ ಶಾಲೆಗೆ ತೆರಳುವ ಮುನ್ನ ಶಾಲೆ ಆರಂಭಿಸುವ ಮುನ್ನ ನಮ್ಮೆಲ್ಲಾ ಶಿಕ್ಷಕರಿಗೆ ನೂರಕ್ಕೆ ನೂರರಷ್ಟು ಶಿಕ್ಷಕರಿಗೆ ಹಾಗೂ ಅವರ ಕುಟುಂಬದವರಿಗೂ ವ್ಯಾಕ್ಸಿನ್ ನೀಡಬೇಕು*

     *24*7 ಕಡಿಮೆ ಸಮಯದ ಅವಧಿಯಲ್ಲಿ ಹೆಚ್ಚು ಶಿಕ್ಷಕರಿಗೆ ನೂರಕ್ಕೆ ನೂರಷ್ಟು ಲಸಿಕೆ ಪಡೆಯದಂತಹ ಎಲ್ಲಾ ಶಿಕ್ಷಕರಿಗೆ ಹಾಗೂ ಅವರ ಕುಟುಂಬದವರಿಗೆ ಲಸಿಕೆಯನ್ನು ನೀಡಬೇಕು ನಮ್ಮೆಲ್ಲ ಶಿಕ್ಷಕರು ಶಿಕ್ಷಣ ವ್ಯವಸ್ಥೆಯಲ್ಲಿ ಸಾರ್ವತ್ರಿಕರಣಕ್ಕಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಯುದ್ಧೋಪಾದಿಯಲ್ಲಿ ಶಾಲೆಗಳಿಗೆ ತೆರಳಲು ಸನ್ನದ್ಧರಾಗಿದ್ದೇವೆ ಆದ್ದರಿಂದ ಲಸಿಕೆ ಯನ್ನು ನೀಡಿ ಶಾಲೆಗಳನ್ನು ಪ್ರಾರಂಭಿಸಿ.24*7 ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಇದನ್ನು ತುರ್ತಾಗಿ ಗಂಭೀರವಾಗಿ ಪ್ರಥಮ ಆದ್ಯತೆ ಯಲ್ಲಿ ಲಸಿಕಾಕರಣ ವನ್ನು ಶಿಕ್ಷಕರಿಗೆ ನೀಡಲೇಬೇಕೆಂದು ನಾವುಗಳಾದ*....

     *ರಾಜ್ಯದ ಸಮಸ್ತ ಶಿಕ್ಷಕರ ಪರವಾಗಿ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ ಸಜ್ಜನ .ಮಹಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್ ಉಪ್ಪಿನ್ .ಗೌರವಾಧ್ಯಕ್ಷರಾದ ಎಲ್ ಐ ಲಕ್ಕಮ್ಮನವರ ಕೋಶಾಧ್ಯಕ್ಷರಾದ ಎಸ್ ಎಫ್ ಪಾಟೀಲ್ ಕಾರ್ಯಾಧ್ಯಕ್ಷರಾದ ಶರಣಪ್ಪ ಗೌಡ ಆರ್ ಕೆ ಮಹಾಪೋಷಕರಾದ ಪವಾಡಪ್ಪ ಕಾಂಬ್ಳೆ ಉಪಾಧ್ಯಕ್ಷರುಗಳಾದ ಗೋವಿಂದ ಜುಜಾರೆ ಹನಮಂತಪ್ಪ ಮೇಟಿ. ಡಿ.ಎಸ್.ಭಜಂತ್ರಿ.ಕುಕನೂರ.ರಾಮಪ್ಪ ಹಂಡಿ .ಎಮ್ ಆಯ್ ಮುನವಳ್ಳಿ ಮಹ್ಮದ್ ರಫಿ .ಡಿ ಟಿ ಬಂಡಿವಡ್ಡರ ಶರಣಬಸವ ಬನ್ನಿಗೋಳ.ಎಂ.ವಿ ಕುಸುಮಾ. ರಾಜಶ್ರೀ ಪ್ರಭಾಕರ್ ಜಿ ಟಿ ಲಕ್ಷ್ಮೀದೇವಮ್ಮ ಕಲ್ಪನಾ ಚಂದನಕರ. ರವಿ ಬಂಗೆನ್ನವರ ಶಿವರಡ್ಡಿ .ಅಶೋಕ.ಬಿಸೆರೊಟ್ಟಿ ನಾಗರಾಜ್ ಆತಡಕರ ನಾಗರಾಜ್ ಕೆ .ರೇಖಾ ದೇವಿ ದೇವಿಕಾ  ಕಮ್ಮಾರ  ಮುಂತಾದ ಪದಾಧಿಕಾರಿಗಳು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ.*

ಗೌರವಾನ್ವಿತ ವಂದನೆಗಳೊಂದಿಗೆ


Spread the love

Leave a Reply

Your email address will not be published. Required fields are marked *