Posts Slider

Karnataka Voice

Latest Kannada News

ನವೆಂಬರ್ 5ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ- ಸಚಿವ ಸುರೇಶಕುಮಾರ

1 min read
Spread the love

ಬೆಂಗಳೂರು: ಕಳೆದ ಐದು ವರ್ಷದಲ್ಲಿ ಒಂದೇ ಒಂದು ಬಾರಿಗೆ ನಡೆದಿದ್ದ ಶಿಕ್ಷಕರ ವರ್ಗಾವಣೆಗಳನ್ನ ಮಾಡಬೇಕೆಂದು ಸಿಎಂ ಯಡಿಯೂರಪ್ಪ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನವೆಂಬರ್ 5ರಿಂದ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಸುರೇಶಕುಮಾರ, ನವೆಂಬರ್ ಐದರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈಗಾಗಲೇ ಭರವಸೆ ನೀಡಿದಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲ ಆದ್ಯತೆ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದು, ನಾಳೆ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ಶಿಕ್ಷಕರ ವರ್ಗಾವಣೆ ವಿಷಯವಾಗಿ ಕಳೆದ ಕೆಲವು ದಿನಗಳಿಂದಲೂ ರಾಜ್ಯದಲ್ಲಿನ ಶಿಕ್ಷಕರ ಸಂಘಗಳು ನಿರಂತರವಾಗಿ ಮನವಿ ಮಾಡಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಆದೇಶ ಮಾಡಿದ್ದು, ಆ ಆದೇಶಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿರುವ ಸಚಿವರು ದಿನಾಂಕವನ್ನೂ ನಿಗದಿ ಮಾಡಿರುವುದು ಶಿಕ್ಷಕ ವಲಯದಲ್ಲಿ ಸಂತಸ ಮೂಡಿಸಿದೆ.


Spread the love

Leave a Reply

Your email address will not be published. Required fields are marked *