Karnataka Voice

Latest Kannada News

ಹುಬ್ಬಳ್ಳಿ “1992 ಗಲಭೆ” ಆರೋಪಿಗಳ ಹುಡುಕಾಟ… ಮರುಜೀವ ಪಡೆದ ‘ಬೆಂಕಿಯಿಟ್ಟ’ ಕೇಸ್…

ಹುಬ್ಬಳ್ಳಿ: 31 ವರ್ಷದ ಬಳಿಕ ರಾಮಜನ್ಮಭೂಮಿ‌ ಹೋರಾಟದ ಪ್ರಕರಣಕ್ಕೆ‌ ಮರುಜೀವ ಬಂದಿದ್ದು, ಹುಬ್ಬಳ್ಳಿಯಲ್ಲಿನ ಹೋರಾಟಗಾರರಿಗೆ ಬಂಧನದ ಭೀತಿ ಆರಂಭವಾಗಿದೆ.
ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರು. 31 ವರ್ಷಗಳ ಬಳಿಕ
ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳ ಏಕಾಏಕಿ ಹುಡುಕಾಟ ಆರಂಭವಾಗಿದೆ.
ರಾಮಮಂದಿರ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ದೂರು ದಾಖಲಾಗಿತ್ತು. ಕರಸೇವೆಗೂ ಮುನ್ನ ಅಂದ್ರೆ, ಡಿಸೆಂಬರ್ 5, 1992 ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ ನಡೆದು ಒಂದು ಮಳಿಗೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 9 ಜನರ ವಿರುದ್ಧ FIR ದಾಖಲಾಗಿತ್ತು.

ವೀಡಿಯೋ ಇಲ್ಲಿದೆ… ಆಗೀನ ಭಾವಚಿತ್ರಗಳು ಇವೆ…

ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 31 ವರ್ಷದ ಬಳಿಕ ಓರ್ವ ಆರೋಪಿಯನ್ನ‌ ಪೊಲೀಸರು ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ.

ಪ್ರಕರಣದ 3ನೇ ಆರೋಪಿ ಶ್ರೀಕಾಂತ್ ಪೂಜಾರಿಯನ್ನ ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಪ್ರಕರಣ ದಾಖಲಾದಾಗ ಆರೋಪಿತರು 30ರಿಂದ 35 ವರ್ಷದ ಒಳಗಿನ ಯುವಕರಾಗಿದ್ದರು. ಈಗ ಅವರಿಗೆಲ್ಲ 65-70 ವರ್ಷಗಳಾಗಿವೆ.

ಇನ್ನುಳಿದ  ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ. ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿ ಹುಡುಕಾಟಕ್ಕೆ‌ ಪೊಲೀಸರು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *