Posts Slider

Karnataka Voice

Latest Kannada News

ಕೊರೋನಾ ಗೆದ್ದು ಬಂದ ವಿನಯ ಕುಲಕರ್ಣಿ: ಸೇವೆಗೆ ಸಿದ್ದನೆಂದ ಮಾಜಿ ಸಚಿವ

1 min read
Spread the love

ಧಾರವಾಡ: ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ದೃಢಪಟ್ಟ ನಂತರ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಕೊರೋನಾ ಗೆದ್ದು ಬಂದಿದ್ದಾರೆ.

ಈ ಬಗ್ಗೆ ಅಧಿಕೃತವಾದ ತಮ್ಮದೇ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದುಕೊಂಡಿರುವ ವಿನಯ ಕುಲಕರ್ಣಿ, “ನಾನು ನಿಮ್ಮ ಆಶೀರ್ವಾದದಿಂದ ಕೊರೋನಾ ಮುಕ್ತನಾಗಿ ಮರಳಿ ನಿಮ್ಮ ಸೇವೆಗೆ ತಯಾರಾಗಿದ್ದೇನೆ. ನೀವು ತೋರಿಸಿದ ಪ್ರೀತಿಗೆ ನನ್ನ ಹೃದಯ ಪೂರ್ವಕ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಲಕ್ಷಣಗಳು ಕಂಡು ಬಂದ ನಂತರ ಟೆಸ್ಟ್ ಮಾಡಿಸಿಕೊಂಡಿದ್ದ ವಿನಯ ಕುಲಕರ್ಣಿಯವರಿಗೆ ಪಾಸಿಟಿವ್ ಇರುವುದು ದೃಢವಾಗಿತ್ತು. ಇದಾದ ನಂತರ ಮನೆಯಲ್ಲಿ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದು, ಇಂದು ಗುಣಮುಖರಾಗಿರುವುದು ಗ್ರಾಮೀಣ ಕ್ಷೇತ್ರದ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.


Spread the love

Leave a Reply

Your email address will not be published. Required fields are marked *