Posts Slider

Karnataka Voice

Latest Kannada News

ಸುಪ್ರೀಂಕೋರ್ಟಲ್ಲಿ ವಿನಯ ಕುಲಕರ್ಣಿ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ…!

Spread the love

ದೆಹಲಿ: ಧಾರವಾಡದ ಜಿಲ್ಲಾ ಪಂ‌ಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸುತ್ತಿರುವ ನ್ಯಾ. ಉದಯ ಲಲಿತ್ ಪೀಠ ವಿಚಾರಣೆಯಲ್ಲಿ ಜುಲೈ 26ಕ್ಕೆ ಮುಂದೂಡಿದೆ. ಜುಲೈ 24ರೊಳಗೆ ಪ್ರತಿಕ್ರಿಯೆ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ನೊಟೀಸ್ ನೀಡಿದೆ. ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಕಳೆದ ವರ್ಷ ನವೆಂಬರ್ 5ರಿಂದ ಜೈಲಿನಲ್ಲಿದ್ದಾರೆ.

ಈ ವರ್ಷ ಫೆ.10ರಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಸಂಪ್ಲಿಮೆಂಟರಿ ಚಾರ್ಜಶೀಟ್ ಸಲ್ಲಿಸಿದ್ದಾರೆ.  ಸಿಬಿಐ ತನಿಖೆ ಕೈಗೆತ್ತಿಕೊಂಡ ಬಳಿಕ‌ ನಡೆದ‌ ಎಲ್ಲ ಮಾಹಿತಿಯನ್ನು ಕಲೆಹಾಕಿದ್ದಾರೆ. ಯೋಗೇಶಗೌಡ ಕೊಲೆಗೆ ಸಂಬಂಧಿಸಿದಂತೆ ಹಲವರನ್ನು ಕರೆಸಿ ತನಿಖೆ ಆರಂಭ ಮಾಡಿದ್ದರು. ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಸಂಪ್ಲಿಮೆಂಟರಿ ಚಾರ್ಜಶೀಟ್ ನಲ್ಲಿ  ಕೊಲೆಗೆ ಸಂಬಂಧಿಸಿದಂತೆ ಇಂಚಿಂಚು ಮಾಹಿತಿ ಕಲೆ ಉಲ್ಲೇಖಿಸಿದ್ದಾರೆ. ಪೊಲೀಸ್ ತನಿಖೆಯಲ್ಲಿ ಓರ್ವನನ್ನು ಬಿಟ್ಟಿರುವುದು ಗಮನಕ್ಕೆ ಬಂದಿತ್ತು. ಸಿಬಿಐ ತನಿಖೆ ಆರಂಭದ ಬಳಿಕ ನಾವು ಮತ್ತಷ್ಟು ಜನರನ್ನು ಬಂದಿಸಿದ್ದೇವೆ. ವಿನಯ ಕುಲಕರ್ಣಿಯನ್ನು ನ. 5 ರ 2020 ರಂದು ಬಂಧಿಸಲಾಗಿದೆ. ವಿನಯ ಪ್ರಕರಣದ 15ನೇ ಆರೋಪಿಯಾಗಿದ್ದಾರೆ.

ಯೋಗೀಶಗೌಡ ಜೊತೆ ವಿನಯ್ ಅವರ ಸಂಬಂಧ ವೈಯಕ್ತಿಕ ದ್ವೇಷ, ರಾಜಕೀಯ ಪೈಪೋಟಿ ನಡೆದಿತ್ತು. ಯೋಗೀಶಗೌಡನನ್ನು ಜಿಪಂ ಚುನಾವಣೆಯಿಂದ ಹಿಂದೆ ಸರಿಯುವಂತೆ ವಿನಯ ಕುಲಕರ್ಣಿ ಯೋಗೀಶ ಸಹೋದರ ಗುರುನಾಥನಿಗೆ ಹೇಳಿದ್ದರು. ಆದರೂ ಚುನಾವಣೆಗೆ ಯೋಗೀಶಗೌಡ ನಿಂತಿದ್ದರು.


Spread the love

Leave a Reply

Your email address will not be published. Required fields are marked *