Posts Slider

Karnataka Voice

Latest Kannada News

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮಾಜಿ ಸಚಿವ ವಿನಯ ಕುಲಕರ್ಣಿ….!

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಭೇಟಿಗೆ ಅವಕಾಶ ನೀಡಿ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಗಳೂರಿನ 82 ನೇ ಹೆಚ್ಚುವರಿ ಸಿಟಿ ಸಿವಿಲ್ ಜಡ್ಜ್ ಎದುರು ಅರ್ಜಿ ಸಲ್ಲಿಸಿದ್ದಾರೆ.

ಹೌದು.. ಇದು ಅಚ್ಚರಿಯಾದ್ರೂ ನಂಬಲೇಬೇಕಾದ ಕಟು ಸತ್ಯ. ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪರ ವಕೀಲ ಮಲ್ಲಿಕಾರ್ಜುನ ಎಂ.ಆರ್. ಅವರು ಇಮೇಲ್ ಮೂಲಕ ಈ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯನ್ನು ವಿಚಾರಣೆಗೆ ಅಂಗಿಕರಿಸಿರುವ ನ್ಯಾಯಾಲಯವು ಜೂನ್ ಮೂರರಂದು ಕೈಗೆತ್ತಿಕೊಳ್ಳಲಿದೆ. ಉತ್ತರ ಕರ್ನಾಟಕ ಭಾಗದ ಜನತೆ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರ ಚಿತ್ತ  ಈ ಅರ್ಜಿಯ ವಿಚಾರಣೆಯತ್ತ ನೆಟ್ಟಿದೆ‌.

ನ್ಯಾಯಾಲಯ ಅನುಮತಿ ನೀಡುತ್ತಾ ಇಲ್ಲವೇ ಎಂಬುದನ್ನು ಜೂನ್ 3 ರಂದು ತಿಳಿಯಲಿದೆ.


Spread the love

Leave a Reply

Your email address will not be published. Required fields are marked *