ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು 21ಕ್ಕೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯನ್ನ ವಿಚಾರಣೆ ಮಾಡಿದ ಹೈಕೋರ್ಟ್ 21ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ.

ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ 2020ರ ನವೆಂಬರ್ 5ರಂದು ಸಿಬಿಐನಿಂದ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.
ಧಾರವಾಡದ ಮನೆಯಲ್ಲಿಯೇ ವಿಚಾರಣೆಗೆ ಪಡೆದಿದ್ದ ಸಿಬಿಐ ಅಂದೇ ಬಂಧನ ಮಾಡಿತ್ತು. ಇದಾದ ನಂತರ ಧಾರವಾಡದ ನ್ಯಾಯಾಲಯವೂ ಸೇರಿದಂತೆ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲೂ ಜಾಮೀನಿಗಾಗಿ ಅರ್ಜಿಯನ್ನ ಸಲ್ಲಿಸಲಾಗಿತ್ತಾದರೂ, ಜಾಮೀನು ತಿರಸ್ಕೃತಗೊಂಡಿತ್ತು.
ಇಂದು ಹೈಕೋರ್ಟನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನ ಏಪ್ರೀಲ್ 21ಕ್ಕೆ ಮುಂದೂಡಿಕ್ಕೆ ಮಾಡಿದ್ದಾರೆ.