ಧಾರವಾಡಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ…!

ಧಾರವಾಡ: ಮನಸೂರ ಬಳಿಯಿರುವ ಜಮೀನನ್ನ ಪತ್ನಿಯ ಹೆಸರಿಗೆ ಜಿಪಿಎ ಮಾಡಲು ನ್ಯಾಯಾಲಯದ ಅನುಮತಿ ಪಡೆದು, ಧಾರವಾಡಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ ಆಗಮಿಸುತ್ತಿದ್ದಾರೆ.

ಕಳೆದ ವರ್ಷ ನವೆಂಬರ್ 5ರಂದು ಸಿಬಿಐನಿಂದ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಬಹು ದಿನಗಳ ನಂತರ ಧಾರವಾಡಕ್ಕೆ ಆಗಮಿಸುತ್ತಿದ್ದಾರೆ.
ವಿನಯ ಕುಲಕರ್ಣಿಯವರು ಮಿನಿ ವಿಧಾನಸೌಧದಲ್ಲಿರುವ ಸಬ್ ರಜಿಸ್ಟ್ರಾರ್ ಕಚೇರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದು, ಹೆಚ್ಚುವರಿ ಬ್ಯಾರಿಕೇಡ್ ಗಳನ್ನ ಹಾಕಿದ್ದಾರೆ.
ಬೆಳಗಾವಿ ಹಿಂಡಲಗಾ ಜೈಲಿನಿಂದ ಆಗಮಿಸುವ ಮಾಜಿ ಸಚಿವ ವಿನಯ ಕುಲಕರ್ಣಿಯವರು, ಇಲ್ಲಿನ ದಾಖಲಾತಿ ಕಾರ್ಯ ಮುಗಿದ ತಕ್ಷಣವೇ ಮತ್ತೆ ಹಿಂಡಲಗಾ ಜೈಲಿಗೆ ಬಿಗಿ ಬಂದೋಬಸ್ತ್ ನಲ್ಲಿ ಮರಳಲಿದ್ದಾರೆ.