ವಿನಯ ಕುಲಕರ್ಣಿ ಜಾಮೀನು- ಮತ್ತೆ ಏಪ್ರಿಲ್ 15ಕ್ಕೆ ಮುಂದೂಡಿಕೆ…!

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಜೈಲು ಬಂಧಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯ ವಿಚಾರಣೆಯನ್ನ ಏಪ್ರಿಲ್ 15ಕ್ಕೆ ಮುಂದೂಡಲಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟನ ನ್ಯಾಯಾಮೂರ್ತಿ ಕೆ.ನಟರಾಜನ್ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ 15ರಂದು ಜಾಮೀನಿಗೆ ಸಂಬಂಧಪಟ್ಟಂತೆ ವಾದ-ಪ್ರತಿವಾದ ನಡೆಯಲಿದೆ.
ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ನವೆಂಬರ್ 5, 2020ರಂದು ಸಿಬಿಐ ಬಂಧನ ಮಾಡಿತ್ತು. ಅದಾದ ನಂತರ ವಿನಯ ಕುಲಕರ್ಣಿಯವರನ್ನ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿಡಲಾಗಿದ್ದು, ಮತ್ತೆ ಅದೀಗ ಮುಂದುವರೆದಿದೆ.
ಈ ಹಿಂದೆಯೂ ಜಾಮೀನಿಗಾಗಿ ಆರ್ಜಿಯನ್ನ ಸಲ್ಲಿಸಲಾಗಿತ್ತಾದರೂ, ಧಾರವಾಡದ ಮೂರನೇಯ ಅಧಿಕ ನ್ಯಾಯಾಲಯ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಾಗೂ ಧಾರವಾಡದ ಹೈಕೋರ್ಟ್ ಜಾಮೀನು ಅರ್ಜಿಯನ್ನ ತಿರಸ್ಕಾರ ಮಾಡಿದ್ದನ್ನ ಇಲ್ಲಿ ಸ್ಮರಿಸಬಹುದಾಗಿದೆ.