Posts Slider

Karnataka Voice

Latest Kannada News

ಯರಿಕೊಪ್ಪದ ಬಳಿ- ಅಳ್ನಾವರದ ಬೈಕ್ ಸವಾರನ ದುರ್ಮರಣ…

1 min read
Spread the love

ಧಾರವಾಡ: ವೇಗವಾಗಿ ಹೋಗುತ್ತಿದ್ದ ಬೈಕ್ ಸವಾರನ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.

ಮೃತ ಬೈಕ್ ಸವಾರನನ್ನ ಅಳ್ನಾವರದ ಪರಶುರಾಮ ದೇಸಾಯಿ ಎಂದು ಗುರುತಿಸಲಾಗಿದೆ. ಧಾರವಾಡದಿಂದ ಮರಳಿ ಹೋಗುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ.

ಬೈಕಿನಿಂದ ಬಿದ್ದ ಪರಿಣಾಮ, ತಲೆಗೆ ಗಂಭೀರವಾದ ಗಾಯವಾಗಿ ತೀವ್ರವಾದ ರಕ್ತಸ್ರಾವವಾಗಿದೆ. ಇದರಿಂದ ಪರಶುರಾಮ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು, ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *